D. K. Shivakumar

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಫಿಕ್ಸ್ ಮಾಡಲಾಗುತ್ತಿದೆ. ಇದು ಮುಂದುವರಿದರೆ ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ. ಮಿಸ್ಟರ್ ಕಮಿಷನರ್, ಬಿ ಕೇರ್ ಫುಲ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಪೊಲೀಸರ ವೈಫಲ್ಯವೇ ಕಾರಣ. ಪೊಲೀಸರು ಬಿಜೆಪಿ ಪಕ್ಷದ ಏಜೆಂಟ್ ತರಹ ಮಾಡುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅದು ಬಿಟ್ಟು ನಂಬರ್ ಹೆಚ್ಚಿಸಲು ಅಮಾಯಕರನ್ನು ಬಂಧಿಸಿದರೆ ನಾವು ಸುಮ್ಮನಿರಲ್ಲ ಎಂದು ಹೇಳಿದ್ದಾರೆ.

ಅದರಲ್ಲದೆ ತನಿಖಾ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
Bangalore Hot News